ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
Cross references
ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು.
ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.