ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
Cross references
ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು.
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್ ಮೇಷಕ್ ಅಬೇದ್ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.
ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.