ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
Cross references
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.