ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
Cross references
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.