ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
Cross references
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.