ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
Cross references
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!
ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.