Home Bibles ದಾನಿಯೇಲ 6:7 · ಕನ್ನಡ ಬೈಬಲ್
ದಾನಿಯೇಲ 6:7 · ಕನ್ನಡ ಬೈಬಲ್

ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.

Cross references

ಕೀರ್ತನೆಗಳು 2:2

ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಕೀರ್ತನೆಗಳು 10:9

ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.

ಕೀರ್ತನೆಗಳು 59:3

ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.

ಕೀರ್ತನೆಗಳು 59:5

ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.

ಕೀರ್ತನೆಗಳು 62:4

ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.

ಕೀರ್ತನೆಗಳು 64:2

ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.

ಕೀರ್ತನೆಗಳು 83:1

ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.

ಕೀರ್ತನೆಗಳು 94:20

ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?

ದಾನಿಯೇಲ 2:4

ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.

ದಾನಿಯೇಲ 3:2

ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.

ದಾನಿಯೇಲ 3:6

ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.

ದಾನಿಯೇಲ 3:11

ಅಡ್ಡಬೀಳದೆಯೂ ಆರಾಧಿಸದೆಯೂ ಇರುವವ ನನ್ನು ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡಬೇಕೆಂದೂ ಆಜ್ಞೆಕೊಟ್ಟಿರುವೆಯಲ್ಲಾ!

ದಾನಿಯೇಲ 3:27

ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.

ದಾನಿಯೇಲ 6:2

ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.

ದಾನಿಯೇಲ 6:22

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.

ಮೀಕ 6:5

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.

ನಹೂಮ 2:12

ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.

ಮತ್ತಾಯ 12:14

ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

ಮತ್ತಾಯ 26:4

ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಮಾರ್ಕ 15:1

ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಯೋಹಾನ 12:10

ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 4:5

ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ

ಅಪೋಸ್ತಲರ ಕೃತ್ಯಗಳು 4:26

ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.

Interlinear

Choose Theme