ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.