ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
Cross references
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ?
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.