ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
Cross references
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.
ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ--
ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.