ದಾನಿಯೇಲನೆಂಬ ನಾನು ನನ್ನ ಶರೀರದೊಳ ಗಿರುವ ಆತ್ಮದಲ್ಲಿ ನೊಂದು ನನ್ನ ಮನಸ್ಸಿನ ದರ್ಶನಗಳ ನಿಮಿತ್ತ ಕಳವಳಗೊಂಡೆನು.
Cross references
ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.
ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು