ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
Cross references
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.