ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
Cross references
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.