Home Bibles ದಾನಿಯೇಲ 7:27 · ಕನ್ನಡ ಬೈಬಲ್
ದಾನಿಯೇಲ 7:27 · ಕನ್ನಡ ಬೈಬಲ್

ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.

Cross references

ಕೀರ್ತನೆಗಳು 2:6

ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 72:11

ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.

ಕೀರ್ತನೆಗಳು 86:9

ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.

ಕೀರ್ತನೆಗಳು 145:13

ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.

ಕೀರ್ತನೆಗಳು 149:5

ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 49:23

ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.

ಯೆಶಾಯ 54:3

ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.

ಯೆಶಾಯ 60:11

ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 4:34

ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ದಾನಿಯೇಲ 7:14

ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

ದಾನಿಯೇಲ 7:18

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

ದಾನಿಯೇಲ 7:22

ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

ಒಬದ್ಯ 1:21

ಇದಲ್ಲದೆ ಚೀಯೋನ್‌ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.

ಸೆಫನ್ಯ 3:19

ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಜೆಕರ್ಯ 14:9

ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.

ಲೂಕ 1:33

ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.

ಯೋಹಾನ 12:34

ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.

ಪ್ರಕಟನೆ 11:15

ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

ಪ್ರಕಟನೆ 17:14

ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

ಪ್ರಕಟನೆ 19:16

ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

ಪ್ರಕಟನೆ 20:4

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ

ಪ್ರಕಟನೆ 22:5

ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.

Interlinear

Choose Theme