ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
Cross references
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.