ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.
Cross references
ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.