ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
Cross references
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.