ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
Cross references
ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
ಕರ್ತನು ಮಾತನಾಡಿ ಮೋಶೆಗೆ--
ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ.
ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.
ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
ನಾವು ದ್ರೋಹಮಾಡಿ ಎದುರು ಬಿದ್ದಿದ್ದೇವೆ; ನೀನು ಮನ್ನಿಸಲಿಲ್ಲ.
ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.