ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
Cross references
ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.
ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.