ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
Cross references
ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.
ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.
ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
ಅಂದಿನಿಂದ ಏನಾಯಿತಂದರೆ ನನ್ನ ಸೇವಕರಲ್ಲಿ ಅರ್ಧಜನರು ಕೆಲಸವನ್ನು ನಡಿಸಿದರು; ಮಿಕ್ಕಾದ ಅರ್ಧ ಜನರು ಈಟಿಗಳನ್ನೂ ಗುರಾಣಿಗಳನ್ನೂ ಬಿಲ್ಲುಗಳನ್ನೂ ಕವಚಗಳನ್ನೂ ಧರಿಸಿದರು. ಪ್ರಧಾನರು ಯೆಹೂದ ಮನೆಯವರ ಹಿಂದೆ ನಿಂತರು.
ಹೀಗೆಯೇ ಗೋಡೆಯು ಐವತ್ತೆರಡು ದಿವಸ ಗಳಲ್ಲಿ ಎಲುಲ್ ತಿಂಗಳ ಇಪ್ಪತ್ತೈದನೇ ದಿವಸದಲ್ಲಿ ತೀರಿತು.
ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.