ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
Cross references
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.