(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
Cross references
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;