ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
Cross references
ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.