ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
Cross references
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
ಅವನು ನಿನ್ನ ಸಂಗಡ ನಿನ್ನ ಮಧ್ಯ ದಲ್ಲಿ ಅವನು ಆದುಕೊಂಡಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ಅವನಿಗೆ ಒಳ್ಳೇದೆಂದು ತೋಚಿದಲ್ಲಿ ವಾಸ ವಾಗಿರಬೇಕು; ಅವನನ್ನು ಉಪದ್ರಪಡಿಸಬಾರದು.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
ನಿನಗೆ ನಿವಾಸದ ಮಂದಿರವನ್ನು ನೀನು ಎಂದೆಂದಿಗೂ ಅದರಲ್ಲಿ ವಾಸವಾಗಿರುವ ಹಾಗೆ ಶಾಶ್ವತ ಸ್ಥಳವನ್ನು ನಿಜವಾಗಿಯೂ ಕಟ್ಟಿಸಿದ್ದೇನೆ ಎಂದು ಹೇಳಿದನು.
ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.