ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
Cross references
ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.
ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.
ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.
ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.