ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
Cross references
ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.