ಆಗ ನಿನ್ನ ದಹನ ಬಲಿಗಳನ್ನೂ ಮಾಂಸವನ್ನೂ ರಕ್ತವನ್ನೂ ನಿನ್ನ ದೇವ ರಾದ ಕರ್ತನ ಬಲಿಪೀಠದ ಮೇಲೆ ಅರ್ಪಿಸಬೇಕು; ಆದರೆ ನಿನ್ನ ಬಲಿಗಳ ರಕ್ತವನ್ನು ನಿನ್ನ ದೇವರಾದ ಕರ್ತನ ಬಲಿಪೀಠದ ಮೇಲೆ ಹೊಯ್ಯಬೇಕು; ಅವುಗಳ ಮಾಂಸವನ್ನು ತಿನ್ನಬೇಕು.
Cross references
ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?