ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
Cross references
ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.
ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.