ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
Cross references
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?