ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
Cross references
ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ;
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
ಕರ್ತನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿ ಕೊಂಡು ಅವನಿಗೆ--ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆದುಕೊಂಡಿದ್ದೇನೆ.
ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು.
ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ