ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
Cross references
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.