Home Bibles ದ್ವಿತೀಯೋಪದೇಶಕಾಂಡ 13:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 13:10 · ಕನ್ನಡ ಬೈಬಲ್

ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.

Cross references

ನಿರ್ಗಮಕಾಂಡ 20:2

ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.

ನಿರ್ಗಮಕಾಂಡ 32:27

ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.

ಲೇವ್ಯಕಾಂಡ 20:2

ನೀನು ತಿರಿಗಿ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್‌ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.

ಲೇವ್ಯಕಾಂಡ 20:27

ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.

ಲೇವ್ಯಕಾಂಡ 24:14

ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.

ಲೇವ್ಯಕಾಂಡ 24:23

ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್‌ ಮಕ್ಕಳು ಮಾಡಿದರು.

ಅಂಕೆಗಳ ಪುಸ್ತಕ 15:35

ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.

ದ್ವಿತೀಯೋಪದೇಶಕಾಂಡ 17:5

ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.

ದ್ವಿತೀಯೋಪದೇಶಕಾಂಡ 17:7

ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 21:21

ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.

ಯೆಹೋಶುವ 7:25

ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

2 ಅರಸುಗಳು 11:18

ದೇಶದ ಜನರೆಲ್ಲರೂ ಬಾಳನ ಮನೆಯಲ್ಲಿ ಹೊಕ್ಕು ಅದನ್ನು ಕೆಡವಿಹಾಕಿ ಅವನ ಬಲಿಪೀಠಗಳನ್ನೂ ವಿಗ್ರಹ ಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದು ಬಿಟ್ಟು ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಇದಲ್ಲದೆ ಯಾಜಕನು ಕರ್ತನ ಮನೆಯಲ್ಲಿ ಅಧಿಕಾರಿಗಳನ್ನು ನೇಮಿಸಿ ದನು.

2 ದಿನವೃತ್ತಾಂತ 24:21

ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.

Interlinear

Choose Theme