Home Bibles ದ್ವಿತೀಯೋಪದೇಶಕಾಂಡ 13:18 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 13:18 · ಕನ್ನಡ ಬೈಬಲ್

ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.

Cross references

ಆದಿಕಾಂಡ 22:17

ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

ದ್ವಿತೀಯೋಪದೇಶಕಾಂಡ 7:26

ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.

ದ್ವಿತೀಯೋಪದೇಶಕಾಂಡ 12:25

ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.

ದ್ವಿತೀಯೋಪದೇಶಕಾಂಡ 12:28

ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.

ದ್ವಿತೀಯೋಪದೇಶಕಾಂಡ 12:32

ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.

ಯೆಹೋಶುವ 7:26

ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

ಕೀರ್ತನೆಗಳು 119:6

ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಮತ್ತಾಯ 7:21

ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

ಮತ್ತಾಯ 7:24

ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

Interlinear

Choose Theme