ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
Cross references
ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.