ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
Cross references
ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ನಿಮ್ಮಲ್ಲಿಯೂ ಇಂಥಿಂಥ ವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯ ಗಳು ಇರುವದು ಅವಶ್ಯವೇ.
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.