Home Bibles ದ್ವಿತೀಯೋಪದೇಶಕಾಂಡ 13:5 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 13:5 · ಕನ್ನಡ ಬೈಬಲ್

ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.

Cross references

ದ್ವಿತೀಯೋಪದೇಶಕಾಂಡ 6:13

ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.

ದ್ವಿತೀಯೋಪದೇಶಕಾಂಡ 7:4

ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.

ದ್ವಿತೀಯೋಪದೇಶಕಾಂಡ 13:10

ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.

ದ್ವಿತೀಯೋಪದೇಶಕಾಂಡ 17:7

ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 18:20

ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.

ದ್ವಿತೀಯೋಪದೇಶಕಾಂಡ 19:19

ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 22:21

ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;

ದ್ವಿತೀಯೋಪದೇಶಕಾಂಡ 22:24

ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.

ದ್ವಿತೀಯೋಪದೇಶಕಾಂಡ 24:7

ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.

ದ್ವಿತೀಯೋಪದೇಶಕಾಂಡ 26:14

ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

ಯೆಹೋಶುವ 23:8

ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.

1 ಸಮುವೇಲ 12:14

ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.

1 ಅರಸುಗಳು 13:19

ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.

1 ಅರಸುಗಳು 18:40

ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.

2 ದಿನವೃತ್ತಾಂತ 34:31

ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.

ಯೆಶಾಯ 9:14

ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.

ಯೆಶಾಯ 28:17

ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.

ಯೆರೆಮಿಯ 14:15

ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.

ಯೆರೆಮಿಯ 28:15

ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ

ಯೆರೆಮಿಯ 29:21

ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 50:6

ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

ಜೆಕರ್ಯ 13:3

ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.

ಅಪೋಸ್ತಲರ ಕೃತ್ಯಗಳು 13:8

ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

1 ಕೊರಿಂಥದವರಿಗೆ 5:13

ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.

2 ತಿಮೋಥೆಯ 4:4

ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.

ಹೆಬ್ರಿಯರಿಗೆ 12:14

ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.

ಪ್ರಕಟನೆ 19:20

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.

Interlinear

Choose Theme