ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
Cross references
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು;
ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ.
ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.