ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
Cross references
ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು.
ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.