ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
Cross references
ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.