ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
Cross references
ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.