Home Bibles ದ್ವಿತೀಯೋಪದೇಶಕಾಂಡ 16:3 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 16:3 · ಕನ್ನಡ ಬೈಬಲ್

ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.

Cross references

ನಿರ್ಗಮಕಾಂಡ 12:8

ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

ನಿರ್ಗಮಕಾಂಡ 12:11

ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.

ನಿರ್ಗಮಕಾಂಡ 12:14

ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.

ನಿರ್ಗಮಕಾಂಡ 12:15

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

ನಿರ್ಗಮಕಾಂಡ 12:19

ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.

ನಿರ್ಗಮಕಾಂಡ 12:26

ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ

ನಿರ್ಗಮಕಾಂಡ 12:32

ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.

ನಿರ್ಗಮಕಾಂಡ 12:39

ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.

ನಿರ್ಗಮಕಾಂಡ 13:3

ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

ನಿರ್ಗಮಕಾಂಡ 34:18

ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್‌ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್‌ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.

ಲೇವ್ಯಕಾಂಡ 23:6

ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.

ಅಂಕೆಗಳ ಪುಸ್ತಕ 9:11

ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.

ಅಂಕೆಗಳ ಪುಸ್ತಕ 28:17

ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.

ಯೆಹೋಶುವ 4:7

ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್‌ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.

1 ಅರಸುಗಳು 22:27

ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.

ಕೀರ್ತನೆಗಳು 102:9

ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.

ಕೀರ್ತನೆಗಳು 111:4

ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.

ಕೀರ್ತನೆಗಳು 127:2

ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಲೂಕ 22:19

ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.

1 ಕೊರಿಂಥದವರಿಗೆ 5:8

ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.

1 ಕೊರಿಂಥದವರಿಗೆ 11:24

ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.

2 ಕೊರಿಂಥದವರಿಗೆ 7:10

ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

1 ತೆಸಲೋನಿಕದವರಿಗೆ 1:6

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.

Interlinear

Choose Theme