ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
Cross references
ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.