ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
Cross references
ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.