ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
Cross references
ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.