ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
Cross references
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.