ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
Cross references
ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;