ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
Cross references
ಅಲ್ಲಿಂದ ಅವರು ಹೊರಟು ಜೆರೆದೆಂಬ ತಗ್ಗಿನಲ್ಲಿ ಇಳುಕೊಂಡರು.
ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ.
ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.