ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
Cross references
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು.
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.