ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
Cross references
ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು.
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.