ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
Cross references
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.
ಕರ್ತನು ತನಗೆ ಹೇಳಿದ ಪ್ರಕಾರವೇ ಯೆಹೋಶು ವನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದುಬಿಟ್ಟು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.
ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ಆದರೆ ಕರ್ತನು ಅವ ನಿಗೆ--ನಾನು ನಿನ್ನ ಸಂಗಡ ಖಂಡಿತವಾಗಿ ಇರುವ ದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ ಅಂದನು.
ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?